Public News 18
Breaking News Breaking-News Headlines Latest Updates Live News Top Stories Trending

ಸಿದ್ದರಾಮಯ್ಯ ವಿರುದ್ದ 37 ಶಾಸಕರಿಂದ ಸತೀಶ್‌ ಜಾರಕಿಹೊಳಿ ಸಹಿ ಸಂಗ್ರಹ: ಇಬ್ಬರ ವಿರುದ್ಧ FIR

ಬೆಳಗಾವಿ: ರಾಜ್ಯ ರಾಜಕೀಯ ವಲಯದಲ್ಲಿ ಪ್ರಭಾವಿ ನಾಯಕರಾಗಿರುವ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಫೇಸ್‌ಬುಕ್‌ನಲ್ಲಿ ಸುಳ್ಳು ವದಂತಿ ಹರಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಎರಡು ಫೇಸ್‌ಬುಕ್ ಪೇಜ್‌ಗಳ ಅಡ್ಮಿನ್‌ಗಳ ವಿರುದ್ಧ ಬೆಳಗಾವಿ ಜಿಲ್ಲಾ ಸಿಇಎನ್ (ಸೈಬರ್ ಕ್ರೈಂ) ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ವಾಲ್ಮೀಕಿ ಸಮಾಜದ ಮುಖಂಡ ರಾಜಶೇಖರ ತಳವಾರ ಎಂಬವರು ದೂರು ದಾಖಲಿಸಿದ್ದಾರೆ. ʻಕರುನಾಡ ಕುರುಬಗೌಡ್ರು ಹಾಗೂ ಬಂಡಾಯ ಧ್ವನಿʼ ಎಂಬ ನಕಲಿ ಫೇಸ್ ಬುಕ್ ಖಾತೆಯಲ್ಲಿ “ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರ ವಿರುದ್ದ 37 ಶಾಸಕರಿಂದ ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಸಹಿ ಸಂಗ್ರಹ ಮಾಡಲಾಗಿದೆ” ಎಂಬ ಗಂಭೀರ ಆರೋಪ ಮಾಡಲಾಗಿತ್ತು.

ಆದರೆ, ಈ ಆರೋಪವನ್ನು ಸ್ವತಃ ಮಾಜಿ ಸಚಿವ ಸತೀಶ್ ಜಾರಕಿಹೊಳಿ ನಿರಾಕರಿಸಿದ್ದರು. ಹೀಗಾಗಿ ಸತೀಶ್ ಅವರ ವಿರುದ್ಧ ಇಲ್ಲಸಲ್ಲದ ಅಪವಾದ ಹೊರಿಸಿ ಅವರ ಹೆಸರು ಹಾಳು ಮಾಡಲು ನಕಲಿ ಫೇಸ್​​ಬುಕ್ ಖಾತೆಯಲ್ಲಿ ಸಂಚು ರೂಪಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರನ್ನು ಸ್ವೀಕರಿಸಿರುವ ಬೆಳಗಾವಿ ಸಿಇಎನ್ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ ನಕಲಿ ಫೇಸ್‌ಬುಕ್ ಖಾತೆಯ ಹಿಂದಿರುವ ವ್ಯಕ್ತಿಗಳು ಯಾರು? ಇದರ ಹಿಂದಿರುವ ಉದ್ದೇಶವೇನು? ಎಂಬ ಬಗ್ಗೆ ತಾಂತ್ರಿಕ ತನಿಖೆ ಆರಂಭಿಸಿದ್ದಾರೆ.

Share

Related posts

Leave a Comment